Thursday, March 31, 2016

ವಿನಮ್ರ ಮನವಿ .

ಸಾಹಿತ್ಯ  ಪ್ರಿಯರೇ , ಸಹೃದಯ ಗೆಳೆಯರೇ , ನಿಮ್ಮೆಲ್ಲರಿಗೂ ನಿಮ್ಮ ಪ್ರೀತಿಯ ಗೆಳೆಯಲಿಂಗೇಶ್ ಹುಣಸೂರು  ಮಾಡುವ ನಮಸ್ಕಾರಗಳು ಹಾಗು ವಿನಮ್ರ ಮನವಿ .

ನನ್ನ  ಬದುಕಿನ  ಈವರೆವಿಗಿನ ಅನುಭವಗಳು , ಕನಸುಗಳು ,ನೆನಪುಗಳು  ಎಲ್ಲವನ್ನುಒಟ್ಟುಗೂಡಿಸಿ "ಬಿಂದುವಿನಿಂದ ಅನಂತದೆಡೆಗೆ " ಕವನ ಸಂಕಲ ರೂಪುಗೊಂಡಿದೆ .

ನಿಮ್ಮಿಂದ ಹೊರತಾದ ನೆನಪುಗಳು , ಕನಸುಗಳು , ಕಲ್ಪನೆಗಳು  ನನ್ನ ಬದುಕಿನಲ್ಲಿಯಾವುದೂ  ಇಲ್ಲ . ಹಾಗಾಗೆ ನನ್ನೆಲ್ಲಾ ಗೆಳೆಯರ ಅಧಮ್ಯ ಪ್ರೀತಿಗೆ  ಕೃತಿಯನ್ನು ಸಮರ್ಪಿಸಿದ್ದೇನೆ .

ಇಲ್ಲಿ ಬಿಟ್ಟು ಹೋದವರ ಬಗೆಗೆ ಕಾಡುವ ನೆನಪುಗಳಿವೆ., ಉಳಿದು ಕೊಂಡವರ ಬಗೆಗೆಪ್ರೀತಿ ಇದೆ , ಗೆಳೆಯರ ಬಗೆಗೆ ಕಾಳಜಿ ಇದೆ , ಸಮಾಜದ ಬಗೆಗೆ ಕಳಕಳಿ ಇದೆ , ಪ್ರೀತಿಯಪಿಸುಮಾತುಗಳಿವೆ , ಬದುಕಿಗೆ ಸ್ಪೂರ್ತಿಯ ಸಾಲುಗಳಿವೆ , ಸುಂದರ ಕಲ್ಪನೆಗಳಿವೆ ,ಕನಸುಗಳ ಚಿತ್ತಾರವಿದೆ ... ಒಟ್ಟಿನಲ್ಲಿ ನೀವು ನಿಮ್ಮನ್ನೊಮ್ಮೆ  ಕವಿತೆಗಳ ಕನ್ನಡಿಯಲ್ಲಿಅನಾರಣ ಮಾಡಿಕೊಳ್ಳಬಹುದು .

*ನಾಡಿನ ಖ್ಯಾತ ವಿಮರ್ಶಕರಾದ ಡಾ//ಬೈರಮಂಗಲ ರಾಮೇಗೌಡ ಅವರು ಮುನ್ನುಡಿಬರೆದಿದ್ದಾರೆ , ಖ್ಯಾತ ಸಾಹಿತಿ ಶ್ರೀ ದ್ವಾರನಕುಂಟೆ  ಪಾತಣ್ಣ ಅವರು ಬೆನ್ನುಡಿ ಬರೆದಿದ್ದಾರೆ .

ಇವೆಲ್ಲದಕ್ಕೂ ಒಂದು ಬೆಲೆ ಇದೆ  ಅದು ನಿಮ್ಮ ಪ್ರೀತಿನಿಮ್ಮಗಳ ಪ್ರೀತಿಗೆ , ಅಭಿಮಾನಕ್ಕೆಬೆಲೆ ಕಟ್ಟಲು ಸಾಧ್ಯವೇ ?!ಆದರೂ  ನಮ್ಮ ಮುಂದಿನ ಸಮಾಜಮುಖಿ ಕನಸುಗಳಸಾಕಾರಕ್ಕೆ ೧೦೦ ರೂ  ಎಂದು ನಿಗಧಿ ಮಾಡಿದ್ದೇವೆ .


* ಕೃತಿಯಿಂದ ಬರುವ ಹಣದಲ್ಲಿ ನಾವು ಮತ್ತು ನಮ್ಮೂರು " ಎಂಬ ಪುಸ್ತಕಸರಣಿಯನ್ನು ಗೆಳೆಯರೆಲ್ಲಾ ಕೂಡಿ ಪ್ರಾರಂಭಿಸುತ್ತಿದ್ದೇವೆಪುಸ್ತಕಗಳನ್ನು ರಾಜ್ಯದ ಎಲ್ಲಾಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ನೀಡಲಾಗುವುದು .

ರಾಜ್ಯದ ಅಂಧ ವಿಧ್ಯಾರ್ಥಿಗಳ ಸಾಹಿತ್ಯಿಕ ಆಸಕ್ತಿಯನ್ನು ಉತ್ತೇಜಿಸಲು  ಕವನಸಂಕಲನದ  ಮತ್ತು  ಪ್ರಕಟಗೊಳ್ಳುವ ಉಚಿತ ಪುಸ್ತಕ  ಧ್ವನಿ ಪಟ್ಯ   ಮಾಡಿ ಉಚಿತವಾಗಿಅಂಧ ಮಕ್ಕಳ ಶಾಲೆಗಳಿಗೆ ಒದಗಿಸಿ , ಸಂವಾದ ಕ್ಕೆ ಅವಕಾಶ ಕಲ್ಪಿಸುವುದು .



ಮೊದಲಿಗೆ ಕರ್ನಾಟಕ ನಾಡು ನುಡಿ  ಬಗೆಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ೧೦೦೦ ಮಾಹಿತಿಗಳನ್ನು ಒಳಗೊಂಡ ಪುಸ್ತಕ ಪ್ರಕಟಣೆ .

*ಅತಿ ಹೆಚ್ಚು ಪುಸ್ತಕ ಕೊಂಡು   ಜ್ಞಾನ ದಾಸೋಹ ಕನಸಿನಲ್ಲಿ ಪಾಲ್ಗೊಂಡು , ಅಂಧಮಕ್ಕಳ ಸಾಹಿತ್ಯ ಪ್ರೀತಿಗೆ ಉಚಿತ ದ್ವನಿ ಪಟ್ಯ  ಉಡುಗೊರೆ ಕೊಡುವ ಸಹೃದಯರಹೆಸರನ್ನು   , ಉಚಿತ ಪುಸ್ತಕ ಹಾಗು ಸಿಡಿ ಯಲ್ಲಿ ಮುದ್ರಿಸಿ , ಅವರ ಸೇವೆಯನ್ನುನೆನೆಯಲಾಗುವುದು .

ಪ್ರತಿ ವರ್ಷ ಒಂದು ಪುಸ್ತಕವನ್ನು  ಯೋಜನೆ ಯಡಿಯಲಿ  ಪ್ರಕಟಿಸಲಾಗುವುದು 

ಆತ್ಮಿಯರೇ ಹೆಚ್ಹು ಹೆಚ್ಚು ಪುಸ್ತಕ ಕೊಂಡುಕೊಳ್ಳಿ , ನಿಮ್ಮ ಗೆಳೆಯರಿಗೂ ತಿಳಿಸಿ ,ಉಡುಗೊರೆ ನೀಡಿ ,  ಮೂಲಕ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ನಮ್ಮ ಕನ್ನಡ ಮಕ್ಕಳಜ್ಞಾನ ವೃದ್ದಿಸುವ   ನಮ್ಮ ಪುಟ್ಟ ಪ್ರಯತ್ನದಲ್ಲಿ , ನೀವೂ ಪಾಲ್ಗೊಳ್ಳಿ ,  ಮೂಲಕಕನ್ನಡ  ಕೆಲಸಸಮಾಜ ಸೇವೆ ಯಲ್ಲಿ ನಿಮ್ಮದು ಹೆಜ್ಜೆ ಗುರುತಿರಲಿ .

ನಮ್ಮ  ಕನಸುಗಳ ಬಗೆಗೆ ನಿಮ್ಮ ಅಭಿಪ್ರಾಯ , ಸಲಹೆ ಗಳನ್ನು ತಪ್ಪದೇ ತಿಳಿಸಿ .

ಚುಕ್ಕಿ ಗೆಳೆಯರ ಬಳಗದ ಪರವಾಗಿ ,

ನಿಮ್ಮವ
ಲಿಂಗೇಶ್ ಹುಣಸೂರ್
ಮಿಂಚೆ :lingeshkc9@gmail.com
ವೆಬ್ :http://lingeshhunsur.blogspot.in
ನಿಸ್ತಂತು ದೂ :9964438393

ಅಂಚೆ ವಿಳಾಸ : ಲಿಂಗೇಶ್ ಹುಣಸೂರು ,
ಅಂಚೆ ಸಹಾಯಕ ,  ಎಸ ವಿ ವಿ ಏನ್ ಭವನ ,
ಎಸ .ಬಿ ಎಂ ಪ್ರಧಾನ ಕಚೇರಿ ಎದುರು ,
ಬೆಂಗಳೂರು -೫೬೦೦೦೯

ಅಂಚೆ ಮೂಲಕ ಪ್ರತಿಗೆ ೧೨೦ ರು ಗಳನ್ನೂ  -ಎಂ  ಮಾಡಿ ಮಾಹಿತಿ ನೀಡಿ .

ಧನ್ಯವಾದಗಳು

No comments:

ಚುಕ್ಕಿ ಸಂಸ್ಥೆ (ರಿ).

. ಬಿಂದುವಿನಿಂದ ಅನಂತದೆಡೆಗೆ .......